ಡಾ|| ಸಂಗಮೇಶ ಸೌದತ್ತೀಮಠ ಅವರಿಗೆ ಕಿವಿ ಮಾತು
ಡಾ|| ಸಂಗಮೇಶ ಸೌದತ್ತೀಮಠ ಅವರಿಗೆ ಕಿವಿ ಮಾತು ಕನ್ನಡದಲ್ಲಿರುವ ವಚನ ಸಾಹಿತ್ಯದ ಆಳವನ್ನು ಇನ್ನೂ ತಿಳಿದುಕೊಳ್ಳಲು ಸಾಧ್ಯವಾಗದವರು ನೀವು ಬಸವಾದಿ ಶರಣರ ಪರಂಪರೆಯ ಧರ್ಮದ ಕುರಿತು ಮಾತನಾಡಲು ಅನರ್ಹರು. ದಯಮಾಡಿ ಏನೂ ಹೇಳದಿದ್ದರೂ ಪರವಾಗಿಲ್ಲ, ಸುಳ್ಳನ್ನು ಹೇಳಿ ನಿಮ್ಮನ್ನು ನೀವು ವಂಚಿಸಿಕೊಳ್ಳಬೇಡಿ. ಲಿಂಗಾಯತರಿಗೂ ಅನ್ಯಧರ್ಮಿಯರಿಗೂ ಇರುವ ಒಂದು ವ್ಯತ್ಯಾಸ ಹೇಳಲು ಬಯಸುತ್ತೇನೆ. ನಿಮ್ಮ ಮನೆಯ ಹೊರಗೆ ಯಾರಾದರೂ ಬಂದು " ನಿಮ್ಮ ಅಜ್ಜಾ ಏನು ಮಾಡ್ತಾಯಿದ್ದಾರೆ ? " ಎಂದು ಕೇಳಿದರೆ ನಿಮ್ಮ ಮೊಮ್ಮಗನು ನನ್ನ ಅಜ್ಜ * ಲಿಂಗ ಪೂಜೆ ಮಾಡ್ಕೊಳ್ಳುತಿದ್ದಾರೆ ಎಂತಾನೇ ವಿನಃ ಮಾಡ್ತಾಯಿದಾರೆ * ಎನ್ನೋದಿಲ್ಲ. ಇಡೀ ವಿಶ್ವದಲ್ಲಿಯೇ ಗುರು ಬಸವಣ್ಣ ನವರ ಕೊಡುಗೆ ಏನೆಂದರೆ ತನ್ನತಾನರಿದು ತಾನೇ ಪೂಜಗೈವುದು. ಇದು ಲಿಂಗಾಯತ ಧರ್ಮದ ಸಂಸ್ಕೃತಿ. ಇಂಥಾ ಸಂಸ್ಕೃತಿಯ ನೀವು ಹೇಳುತ್ತಿರುವ ಜಾತಿವಾದಿಗಳ ಮನೆಯಲ್ಲಿ ಕಾಣಲಾಗದು! ಈ ಸಂದರ್ಭದಲ್ಲಿ ಅಲ್ಲಮಪ್ರಭು ದೇವರ ಒಂದು ವಚನ ನೆನಪಾಗುತ್ತಿದೆ. " ಅಜ್ಞಾನವೆಂಬ ತೊಟ್ಟಿಲೊಳಗೆ, ಜ್ಞಾನವೆಂಬ ಶಿಶುವ ಮಲಗಿಸಿ, ಸಕಲ ವೇದಶಾಸ್ತ್ರವೆಂಬ ನೇಣ ಕಟ್ಟಿ, ಹಿಡಿದು ತೂಗಿ ಜೋಗುಳವಾಡುತ್ತಿದ್ದಾಳೆ ಭ್ರಾಂತಿಯೆಂಬ ತಾಯಿ ! ತೊಟ್ಟಿಲು ಮುರಿದು ನೇಣು ಹರಿದು, ಜೋಗುಳ ನಿಂದಲ್ಲದೆ, ಗುಹೇಶ್ವರನೆಂಬ ಲಿಂಗವ ಕಾಣಬಾರದು." ಅಜ್ಞಾನವನ್ನು ನಿರ್ಮೂಲನೆ ಮಾಡಬೇಕಾದರೆ ಏನು ಮಾಡಬೇಕೆಂಬುದನ್ನು ಪ್ರಪ್ರಥಮ ಶೂನ್ಯ ಪೀ...